ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

 ಡಿ.ದೇವರಾಜು ಅರಸು ಅವರ ಜನ್ಮ ದಿನಾಚರಣೆ: ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ
Share this post


ಕಾರವಾರ, ಆ.17, 2023: ಡಿ.ದೇವರಾಜು ಅರಸು ಅವರ 108 ನೇ ಜನ್ಮ ದಿನಾಚರಣೆಯನ್ನು ಆ 20 ರಂದು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ದತೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ ದೇವರಾಜು ಅರಸು 108 ಜನ್ಮ ದಿನಾಚರಣೆಗೆ ಸಂಬಂಧಿಸಿದಂತೆ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅದ್ಯಕ್ಷತೆವಹಿಸಿ ಅವರು ಮಾತನಾಡಿದರು.

ದೀನ ದಲಿತರ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ತಮ್ಮ ಜೀವನವನ್ನು ಮೂಡಿಪಾಗಿಟ್ಟ ಧೀಮಂತ ವ್ಯಕ್ತಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಕಳೆದ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಸಾರ್ವಜನಿಕರು ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಅಂದು ಬೆಳಗ್ಗೆ 10. ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ವಿವಿಧ ಕಲಾ ತಂಡಗಳೊಂದಿಗೆ ಡಿ. ದೇವರಾಜ ಅರಸು ರವರ ಭಾವಚಿತ್ರದ ಮೆರವಣಿಗೆ ಮೂಲಕ ಜಿಲ್ಲಾ ರಂಗ ಮಂದಿರಕ್ಕೆ ಸಾಗಿ ಬೆಳಗ್ಗೆ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಗರಸಭೆಯ ಸ್ವಸಹಾಯ ಸಂಘಗಳ ಮೂಲಕ ಕರಕುಶಲ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳಿಗೆ ವ್ಯವಸ್ಥೆಯನ್ನು ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಉಪ ವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಸತೀಶ್ ಪವಾರ, ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಎಲಿಷಾ ಎಲಕಪಾಟಿ, ಪರಿಶಿಷ್ಟ ಪಂಗಡದ ಮುಖಂಡರಾದ ಹನಮಂತ ತಳವಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸತೀಶ್, ತಹಶೀಲ್ದಾರ ನಿಶ್ಚಲ್ ನರೋನಾ, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!