ಬೆಳ್ತಂಗಡಿ, ಅ 11: ಧರ್ಮಸ್ಥಳದ ಲಲಿತೋದ್ಯಾನದಲ್ಲಿ ಮತ್ಸ್ಯ ಪ್ರದರ್ಶನಾಲಯವನ್ನು ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ ಪ್ರಾಣಿ – ಪಕ್ಷಿಗಳನ್ನು ಪ್ರೀತಿಯಿಂದ ಸಾಕುವುದರಿಂದ ನಮ್ಮ ಮಾನಸಿಕ ಒತ್ತಡಗಳು ದೂರವಾಗುತ್ತವೆ. ಅಲಂಕಾರಿಕ ಮೀನುಗಳನ್ನು ಕೆರೆ, ನದಿ, ಸಮುದ್ರದಲ್ಲಿ ನೋಡಲು ಸಾಧ್ಯವಿಲ್ಲ. ಮೀನು ಸಾಕುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಉದ್ಘಾಟನಾ ಭಾಷಣದಲ್ಲಿ ಸಚಿವರು ತಮ್ಮ ಇಲಾಖೆಯ ಸಾಧನಗಳ ಬಗ್ಗೆ ತಿಳಿಸಿದರು. Also read: Kasarkod, Padubidri […]Read More
ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಸಾಂಕೇತಿಕವಾಗಿ ಚಾಲನೆ Read More
ಉಡುಪಿ, ಅ 10 : ಕೋವಿಡ್ 19 ನಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವವರ ಪ್ರಮಾಣಅತ್ಯಂತ ಕಡಿಮೆಯಾಗಿದ್ದು, ಇಡೀ ರಾಜ್ಯದಲ್ಲಿ ಈ ಸಾಧನೆ ಮಾಡಿರುವ 3 ಜಿಲ್ಲೆಗಳಲ್ಲಿ ಉಡುಪಿ ಒಂದಾಗಿದೆ. ಉಳಿದ 2 ಜಿಲ್ಲೆಗಳಲ್ಲಿ ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ, ಸಾವಿನ ದವಡೆಯಲ್ಲಿದ್ದ ರೋಗಿಗಳನ್ನು , ಬೇರೆಡೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ಅಂತಹ ರೋಗಿಗಳಿಗೆ , ಜಿಲ್ಲೆಯಲ್ಲೇ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ, ಇದಕ್ಕೆ ಮುಖ್ಯ ಕಾರಣ ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿಯರ್ಸ್ ಗಳು ಎಂದು […]Read More
ಮಂಗಳೂರು ಅ 10:- ಪ್ರಸಕ್ತ ಸಾಲಿನಲ್ಲಿ ಮಂಗಳೂರು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್ ಸಂಸ್ಥೆಯಲ್ಲಿರುವ ಇಲೆಕ್ಟ್ರಾನಿಕ್ ಆ್ಯಂಡ್ ಕಮ್ಯನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ ಹಾಗೂ ಲೈಬ್ರೆರಿ ಆ್ಯಂಡ್ ಇನ್ಫಾರ್ಮಮೇಶನ್ ಸೈನ್ಸ್ ಕೋರ್ಸ್ಗಳ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https;//dtek.karnataka.gov.in ವೆಬ್ಸೈಟ್ ಹಾಗೂ ದೂ.ಸಂ.0824-2482334 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ಅ 10 :– ಮಂಗಳೂರು ವಿಶ್ವವಿದ್ಯಾನಿಲಯ ದೂರಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಅಕ್ಟೋಬರ್ 15 ರಿಂದ ಪ್ರಾರಂಭವಾಗಬೇಕಾಗಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಈ ಪರೀಕ್ಷೆಯು ಅಕ್ಟೋಬರ್ 27 ರಿಂದ ಪ್ರಾರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿ ಮತ್ತು ಪರೀಕ್ಷಾ ಕೇಂದ್ರಗಳ ವಿವರವು ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.mangaloreuniversity.ac.in ನಲ್ಲಿ ಲಭ್ಯವಿರುತ್ತದೆ. ಈ ಬದಲಾವಣೆಯನ್ನು ದೂರಶಿಕ್ಷಣದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷಾ ಅಭ್ಯರ್ಥಿಗಳು ಗಮನಿಸುವಂತೆ ಕುಲಸಚಿವರ ಪ್ರಕಟಣೆ ತಿಳಿಸಿದೆ.Read More
ಮಂಗಳೂರು ಅ 10 :- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ವೆಬ್ ಸೈಟ್ kacdc.karnataka.gov.in ನಲ್ಲಿ ನವೆಂಬರ್ 15 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ನಿಂದ ಪಡೆದು ಸಂಬಂಧಿಸಿದ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್ ಬಸ್ಸು ನಿಲ್ದಾಣದ ಹತ್ತಿರ, ಮಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ […]Read More
ಪರೀಕ್ಷಾ ಕೇಂದ್ರದ ಹೊರ ಭಾಗದಲ್ಲಿ ಹಾಗೂ ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಶಿಕ್ಷಕರು ಎಚ್ಚರ ವಹಿಸಬೇಕು ಕೋವಿಡ್ ಪಾಸಿಟಿವ್ ಬಂದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೇಂದ್ರಗಳನ್ನು ಗುರುತಿಸಬೇಕು ಉಡುಪಿ, ಅ 09:ಅಕ್ಟೋಬರ್ 13 ಹಾಗೂ 14 ರಂದು ನಡೆಯಲಿರುವ ಡಿಪ್ಲೋಮಾಮತ್ತು ಪಿಜಿಸಿಇಟಿ ಪರೀಕ್ಷೆಯಲ್ಲಿಕೋವಿಡ್ ಸೋಂಕು ತಡೆಗೆ ಸರ್ಕಾರ ಹೊರಡಿಸಿರುವ ಎಲ್ಲಾಅಗತ್ಯ ಮುಂಜಾಗೃತ ಕ್ರಮಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದರು. ಅವರುಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ […]Read More
ಉಡುಪಿ ಅ 09: ಎಡನೀರು ತೋಟಕಾಚಾರ್ಯ ಸಂಸ್ಥಾನದ ಪೀಠಾಧಿಪತಿಗಳಾಗಿ ದೀಕ್ಷಿತರಾಗಲಿರುವ ಶ್ರೀ ಜಯರಾಮ ಮಂಜತ್ತಾಯರು ತಮ್ಮ ಸನ್ಯಾಸ ದೀಕ್ಷಾ ಪೂರ್ವಭಾವಿ ತೀರ್ಥ ಕ್ಷೇತ್ರ ಸಂಚಾರ ನಿಮಿತ್ತ ಗುರುವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣಮುಖ್ಯಪ್ರಾಣರ ದರ್ಶನ ಪಡೆದ ಬಳಿಕ ಶ್ರೀ ಮದನಂತೇಶ್ವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಅಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಅದೃಶ್ಯ ಸನ್ನಿಧಾನದ ದರ್ಶನ ಪಡೆದು ಭಕ್ತಿ ಸಮರ್ಪಸಿದರು. ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬಳಿಕ […]Read More
ಬೆಳ್ತಂಗಡಿ, ಅ 08: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅ. 17 ರಿಂದ 24ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 8 ರ ವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ವಿವರ ಅ. 17 (ಶನಿವಾರ): ಕುಮಾರಿ ಸಾನ್ವಿ ಶೆಟ್ಟಿ, ಬೆಂಗಳೂರು (ಸುಗಮ ಸಂಗೀತ) ಅ. 18 (ಆದಿತ್ಯವಾರ): ಶ್ರೀಮತಿ ಸುನಿತಾ ಶ್ರೀಪಾದ್ ರಾವ್, ಸಾಗರ (ಸುಗಮ ಸಂಗೀತ) ಅ. 19 (ಸೋಮವಾರ): ಕುಮಾರಿ […]Read More
