ಮಂಗಳೂರು ನ 06:- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್ 30 ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ಮೌಲನಾ ಅಝಾದ್ ಭವನ, ಓಲ್ಡ್ಕೆಂಟ್ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ನ 06:- ಬೆಳ್ತಂಗಡಿ ಘಟಕದ ಗೃಹರಕ್ಷಕ ವಿನೋದ್ರಾಜ್ ಆಳ್ವ ಇವರಿಗೆ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ನವೆಂಬರ್ 6 ರಂದು ದ.ಕ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಠ ಡಾ: ಮುರಲೀ ಮೋಹನ್ ಚೂಂತಾರು ರವರು ವೈದ್ಯಕೀಯ ಸಹಾಯ ಧನ ಚೆಕ್ನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಗೃಹರಕ್ಷಕರಿಗೂ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿ ಇದ್ದು, ಗೃಹರಕ್ಷಕರ ಮಕ್ಕಳ ವೈದ್ಯಕೀಯ ವೆಚ್ಚ ಹಾಗೂ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸಹಾಯ ಧನ ನೀಡಲಾಗುತ್ತದೆ. ಪ್ರತಿ ಗೃಹರಕ್ಷಕರೂ […]Read More
ಮಂಗಳೂರು ನ 06:- ಪ್ರಸ್ತುತ ಸಾಲಿನ ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ನೀಡಿರುವ ಯೋಜನೆಗಳ ಹಾಗೂ ಯೋಜನೇತರ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರ ತಮ್ಮ ಕಚೇರಿಯ ಸಭಾಂಗಣದಲ್ಲಿ ವಿಶೇಷ ಘಟಕ/ ಗಿರಿಜನ ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ […]Read More
ಗ್ರಂಥಾಲಯ - ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More
ಉಡುಪಿ, ನ 06 : ಉಡುಪಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ನವಂಬರ್ 13 ರಿಂದ ಅನ್ವಯವಾಗುವಂತೆ ಬಸ್ ಪ್ರಯಾಣ ದರವನ್ನು ಪರಿಷ್ಕರಿಸಿದೆ. ಉಡುಪಿ ಜಿಲ್ಲೆಯಾದ್ಯಂತ ಕೆ ಎಸ್ ಆರ್ ಟಿ ಸಿ ಮತ್ತು ಎಲ್ಲಾ ಖಾಸಗಿ ಬಸ್ಸುಗಳಲ್ಲಿ ಇಲೆಕ್ಟ್ರಾನಿಕ್ ಟಿಕೆಟ್ ಮಷೀನ್ ನಿಂದಲೇ ಕಡ್ಡಾಯವಾಗಿ ಟಿಕೇಟನ್ನು ಪ್ರಯಾಣಿಕರಿಗೆ ವಿತರಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.ತಪ್ಪಿದ್ದಲ್ಲಿ ಬಸ್ಸಿನ ನಿರ್ವಾಹಕ ಹಾಗೂ ಮಾಲಕರ ಮೇಲೆ ಕಾನೂನಿನಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.Read More
ಉಡುಪಿ, ನ 06 : ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆಸಮೀಕ್ಷೆ ಕಾರ್ಯವು ಕೈಗೊಳ್ಳಲಾಗಿರುತ್ತದೆ. ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ಸಮೀಕ್ಷೆ ವೆಬ್ ಪೋರ್ಟಲ್ www.cropsurvey.karnataka.gov.in ಅಥವಾ ಮೊಬೈಲ್ ಆಪ್ Bele Darshak Karnataka-2020-21 ಮೂಲಕ ಆಕ್ಷೇಪಣೆ ಸಲ್ಲಿಸಬಹುದು. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ, ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕಾರವಾರ, ನ 05:ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮರಳು ಸಿಗುತ್ತಿಲ್ಲ, ಸಿಕ್ಕರೂ ಕೂಡಾ ದುಪ್ಪಟ್ಟು ಬೆಲೆ ತೆರಬೇಕಾಗಿದೆ ಎಂಬ ಕೂಗು ಪದೇ ಪದೇ ಕೇಳಿ ಬರುತ್ತಿದ್ದು, ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಅನುಮತಿ ಪಡೆದಿರುವ ಟಿಪಿ ದಾರರು ಅಥವಾ ಸಾಗಾಣಿಕೆದಾರರು ಸಾರ್ವಜನಿಕರಿಂದ ಹೆಚ್ಚಿನ ಬೆಲೆಯನ್ನು ವಸೂಲಿ ಮಾಡುತ್ತಿರುವದು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಗಮನಕ್ಕೆ ಬಂದಿರುತ್ತದೆ. ಇದನ್ನು ನಿಯಂತ್ರಿಸುವ ಅವಶ್ಯಕತೆ ಇದ್ದು ಜಿಲ್ಲೆಯ ಸಾಮಾನ್ಯ ನಾಗರೀಕರಿಗೆ ಕೂಡಾ ಯೋಗ್ಯದರದಲ್ಲಿ ಮರಳು ಲಬ್ಯವಾಗುವಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ […]Read More
ಉಡುಪಿ, ನ 05: ಶ್ರೀಕೃಷ್ಣಮಠದಲ್ಲಿ ಆಶ್ವಯುಜ ಶುಕ್ಲ ತ್ರಯೋದಶಿಯಿಂದ ಕೃಷ್ಣ ಪಂಚಮಿಯವರೆಗೆ ಬಡಗುಮಾಳಿಗೆಯಲ್ಲಿ ನಿರ್ಮಿಸಿದ ಮಂಟಪದಲ್ಲಿ ನಡೆಯುತ್ತಿರುವ ಋಕ್ಸಂಹಿತಾ ಯಾಗ ಇಂದು ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು. ಮಹಾಮಂಗಳಾರತಿ ಹಾಗೂ ಪೂರ್ಣಾಹುತಿಯು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಧಾನಿ ವಿದ್ವಾನ್ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ನಂತರ ಮಧ್ವಸರೋವರದಲ್ಲಿ ಅವಭೃತ ಸ್ನಾನ ನಡೆಯಿತು.Read More
ಬೆಳ್ತಂಗಡಿ, ನ 05: ಧರ್ಮಸ್ಥಳದ ಹಿಂದೂ ರುದ್ರಭೂಮಿಯ ಸಮಿತಿ ಸದಸ್ಯರ ಆಶಯದಂತೆ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸುಮಾರು 6.00ಲಕ್ಷ ವೆಚ್ಚದಲ್ಲಿ ನವೀಕರಣ ಕಾರ್ಯವು ನಡೆಯುತ್ತಿದೆ. ಈ ನವೀಕರಣ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪೂರಕ ಅನುದಾನವಾಗಿ ರೂ.2,50,000 ಮಂಜೂರಾತಿ ನೀಡಿದ್ದಾರೆ. ಧರ್ಮಸ್ಥಳ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ರವರ ಸಲಹೆ ಸೂಚನೆಯಂತೆ ನವೀಕರಣದ ಅಂಗವಾಗಿ ನೂತನ ಸಿಲಿಕಾನ್ ಬಾಕ್ಸ್ ಅಳವಡಿಕೆ, ಶವಕಟ್ಟೆ, ವಿಶ್ರಾಂತಿ ಕೊಠಡಿ, […]Read More
ಪ್ರತೀ ಅರ್ಹ ಫಲಾನುಭವಿಗಳಿಗೆ ರೂ.10,000 ಬ್ಯಾಂಕ್ ಸಾಲವನ್ನ ಶೇ 7% ಬಡ್ಡಿ ಸಹಾಯ ಧನದೊಂದಿಗೆ ನೀಡಲಾಗುತ್ತದೆ ಮರುಪಾವತಿಯನ್ನು 12 ಮಾಸಿಕ ಕಂತುಗಳಲ್ಲಿ ಪಾವತಿ ಮಾಡಬಹುದು ನಿಯಮಿತವಾಗಿ ಸಾಲ ಮರುಪಾವತಿ ಮಾಡಿದ್ದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ರೂ.1,200 ಕ್ಯಾಶ್ಬ್ಯಾಕ್ ಪಡೆಯಲು ಅವಕಾಶವಿದೆ ಮಂಗಳೂರು ನ 05: ಕೋವಿಡ್-19 ಲಾಕ್ಡೌನ್ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರವ ನಗರ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ತರ್ತು ಕಿರು ಸಾಲವನ್ನು ಒದಗಿಸುವ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿ […]Read More
