Tags :Applications

ಕನ್ನಡ

ಚೀಫ್ ವಾರ್ಡ್‍ನ್ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿರುವ ಪೌರರಕ್ಷಣಾ ಪಡೆಯ ಮೇಲುಸ್ತುವಾರಿಗಾಗಿ ಚೀಫ್ ವಾರ್ಡನ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Uttara Kannada

ಸಾವಯವ ಸಿರಿ: ಅರ್ಜಿ ಆಹ್ವಾನ

ಆಸಕ್ತ ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳು ರಾಜ್ಯದಲ್ಲಿ ಕಳೆದ ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಬೇಕು. ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರಬೇಕು. ಕನಿಷ್ಠ 10 ಹೆ. ವ್ಯವಸಾಯ ಯೋಗ್ಯ ಪ್ರದೇಶವನ್ನು ಹೊಂದಿರಬೇಕು. Read More

Dakshina Kannada

ಎನಿಮಲ್ ವೆಲ್‍ಫೇರ್ ವಾರ್ಡನ್- ಅರ್ಜಿ ಆಹ್ವಾನ

ಜಿಲ್ಲಾ ಪ್ರಾಣಿದಯಾ ಸಂಘದ ಸಹಯೋಗದಲ್ಲಿ ಪ್ರಾಣಿ ಕ್ರೌರ್ಯ ತಡೆಗಟ್ಟುವ ದೈನಂದಿನ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಂಭಾವನೆ ಅಪೇಕ್ಷಿಸದ ಎನಿಮಲ್ ವೆಲ್‍ಫೇರ್ ವಾರ್ಡನ್ ಆಗಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Uttara Kannada

ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ

ಕಾರವಾರ ಫೆ. 6, 2022: ಕರ್ನಾಟಕ ಸಾಹಿತ್ಯ ಅಕಡೆಮಿಯ ವತಿಯಿಂದ ಮಾರ್ಚ ತಿಂಗಳಿನಲ್ಲಿ 5 ದಿನಗಳ ವರೆಗೆ ರಾಷ್ಟ್ರೀಯ ಕನ್ನಡ ಸಂಶೋಧನಾ ಕಮ್ಮಟ ಹಮ್ಮಿಕೊಳ್ಳಲಾಗಿದೆ. ಕಮ್ಮಟದ ಪರ್ಯಾಯ ಗೋಷ್ಟಿಯಲ್ಲಿ ರಾಷ್ಟ್ರೀಯ ಕನ್ನಡ ಸಂಶೋಧನಾ ಕುರಿತಾಗಿ ಪ್ರಬಂಧ ಮಂಡಿಸುವವರು ಫೆ.22ರೊಳಗಾಗಿ ಅರ್ಜಿಯೊಂದಿಗೆ ಪ್ರಬಂಧವನ್ನು ಅಕಾಡೆಮಿಗೆ, ರಿಜಿಸ್ಟರ್ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ವೆಬ್‍ಸೈಟ್ http://sahityaacademy.karnataka.gov.in ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟಾರ್ ಕರಿಯಪ್ಪಾ. ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Dakshina Kannada

ದಕ್ಷಿಣ ಕನ್ನಡ: ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಸ್ತುತ ಜಿಲ್ಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. 6 ರಿಂದ 10ನೇತರಗತಿಯ ವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.Read More

ಕನ್ನಡ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.Read More

ಕನ್ನಡ

ಸಹಾಯಧನ : ಅವಧಿ ವಿಸ್ತರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More

ಕನ್ನಡ

ವಿದ್ಯಾಸಿರಿ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಶಿಖ್) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ಯಡಿಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜ. 10 ರವರೆಗೆ ವಿಸ್ತರಿಸಲಾಗಿದೆ.Read More

Dakshina Kannada

ಮೀನು ಸಾಗಾಟ ವಾಹನ ಖರೀದಿಗೆ ಸಹಾಯಧನ

ತಾಜಾ ಮೀನು ಸಾಗಾಟ ಮಾಡಲು ಉಪಯೋಗಿಸುವ ತ್ರಿಚಕ್ರ ಹಾಗೂ ನಾಲ್ಕುಚಕ್ರ ವಾಹನಗಳ ಖರೀದಿಗಾಗಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮೀನುಗಾರಿಕೆ ಬಂದರಿನಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ: 0824-2451292 ಅನ್ನು ಸಂಪರ್ಕಿಬಹುದು ಎಂದು ಮಿನುಗಾರಿಕೆ ಉಪನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!