Tags : Applications

ಅರ್ಜಿ ಆಹ್ವಾನ

ಪ.ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಫೆಲೋಶಿಪ್- ಅರ್ಜಿ ಆಹ್ವಾನ

ಉಡುಪಿ, ಡಿ 01, 2020: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ವೆಬ್‌ಸೈಟ್ https://karnatakasangeetanrityaacademy.com ಮೂಲಕ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 15 ರ ಒಳಗೆ ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, […]Read More

ಕನ್ನಡ

ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್‍: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರವಾರ, ನ 30, 2020: ಬೆಂಗಳೂರಿನ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್‍ನ ಟ್ರೇನಿಂಗ್ ಸಂಸ್ಥೆ ಯು, (HAL) ಫಿಟ್ಟರ್, ಟರ್ನರ್, ಮಶಿನಿಷ್ಟ ಇಲೆಕ್ಟ್ರಿಶಿಯನ್, ವೆಲ್ಡರ್, ಫೌಂಡರಿಮೆನ್, ಕೋಪಾ ಕಾರ್ಪೆಂಟರ್, ಪೌಂಡರಿಮೆನ್ ಹಾಗೂ ಶೀಟ್‍ಮೆಟಲ್ ವರ್ಕರ್, ಅಪ್ರೆಂಟಿಸ್ ಒಂದು ವರ್ಷದ ತರಬೇತಿಗಾಗಿ, ಐ.ಟಿ.ಐ. ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಉದ್ಯೋಗ ವಿನಿಮಯ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‍ಲೈನ್ ವೆಬ್‍ಸೈಟ್ apprenticeshipindia.org/candidate-registration ನಲ್ಲಿ ಮೊದಲು ನೋಂದಣಿ ಮಾಡಬೇಕು. ಆ ನೋಂದಣಿ ಸಂಖ್ಯೆಯೊಂದಿಗೆ ಉದ್ಯೋಗ ವಿನಿಮಯ […]Read More

ಅರ್ಜಿ ಆಹ್ವಾನ

ಮೀನುಗಾರರಿಗೆ ಲೈಫ್ ಜಾಕೆಟ್/ಲೈಫ್‍ಬಾಯ್‍ಗಾಗಿ ಅರ್ಜಿ ಆಹ್ವಾನ

ಮಂಗಳೂರು, ನ 29, 2020:  ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ನಾಡದೋಣಿ ಮೀನುಗಾರರಿಗೆ ಹಾಗೂ ಮೀನುಗಾರಿಕೆ ಇಲಾಖೆಯಿಂದ ನೋಂದಾಯಿಸಲ್ಪಟ್ಟ ನಾಡದೋಣಿ ಮೀನುಗಾರರಿಗೆ ಲೈಫ್ ಜಾಕೆಟ್/ಲೈಫ್‍ಬಾಯ್‍ಗಳನ್ನು ಉಚಿತವಾಗಿ ನೀಡಲಿದ್ದು ಆಸಕ್ತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಹಿತಿ ಕೇಂದ್ರ ಕಟ್ಟಡ, ಸೌತ್ ವಾರ್ಫ್ ಬಂದರು ಮಂಗಳೂರು ಅಥವಾ ದೂ.ಸಂ:0824-2421680ಗೆ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಪ.ಜಾತಿ/ ಪಂಗಡದ ಕಲಾಸಕ್ತರಿಗೆ ಜಾನಪದ ತರಬೇತಿ

ಉಡುಪಿ, ನ 26: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಜಾನಪದ ನೃತ್ಯ, ಸಂಗೀತ ಮುಂತಾದ ಕಲಾ ಪ್ರಕಾರಗಳಲ್ಲಿ 3 ತಿಂಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಗುರುಗಳಿಗೆ ಮತ್ತು ಶಿಬಿರಾರ್ಥಿಗಳಿಗೆ ಗೌರವ ಸಂಭಾವನೆ ನೀಡಲಾಗುವುದು ಹಾಗೂ ಅರ್ಜಿಯನ್ನು ಇತ್ತೀಚಿಗೆ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಡಿಸೆಂಬರ್ 2 […]Read More

ಅರ್ಜಿ ಆಹ್ವಾನ

ಇಂದಿರಾ ಗಾಂಧಿ ವಸತಿ ಶಾಲೆಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ

ಕಾರವಾರ, ನ 24: ಅಂಕೋಲಾ ತಾಲೂಕಿನ ಬೇಲೇಕೇರಿ ಹೊಬಳಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ 6 ರಿಂದ 9ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ವಿಜ್ಞಾನ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 30ರೊಳಗಾಗಿ ಸ್ವ-ವಿವರ ಮತ್ತು ವಿದ್ಯಾರ್ಹತೆಯ ದಾಖಲೆಗಳನ್ನು ವಸತಿ ಶಾಲೆಗೆ ಸಲ್ಲಿಸಬೇಕು. ಆಯ್ಕೆಯಾದ ಶಿಕ್ಷಕರುಗಳಿಗೆ ಮಾಸಿಕ 10 ಸಾವಿರ ರೂಪಾಯಿಗಳನ್ನು ಗೌರವಧನ ನೀಡಲಾಗುವುದು. ಅಭ್ಯರ್ಥಿಯ ವಿದ್ಯಾರ್ಹತೆ; ಬಿಎ,ಬಿಇಡಿ ಹಾಗೂ ಬಿಎಸ್‍ಸಿ ಬಿ.ಇಡಿ(ಸಿಬಿಝಡ್) ಆಗಿರಬೇಕು. […]Read More

ಕನ್ನಡ

ವಸತಿ ಶಾಲೆ: ಅರ್ಜಿ ಆಹ್ವಾನ

ಕಾರವಾರ, ನ 23: ಕರ್ನಾಟಕ ವಸತಿ ಶಿಕ್ಷಣ ಸಂಘದ ಅಧೀನದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿ ಉಳಿದ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. 6 ಮತ್ತು 7ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಮತ್ತು ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯದ ಆಸಕ್ತ ವಿದ್ಯಾರ್ಥಿಗಳು ಡಿಸೆಂಬರ್ 1 ರೊಳಗಾಗಿ ಆನ್‍ಲೈನ್ […]Read More

ಕನ್ನಡ

ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ – ಅರ್ಜಿ ಆಹ್ವಾನ

ಉಡುಪಿ, ನ 23: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲಾ ಕಛೇರಿಯಿಂದ 2020-21ರ ಸಾಲಿನಲ್ಲಿ ಶುದ್ಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ನೋಂದಾಯಿತ ಸಂಘ-ಸಂಸ್ಥೆಗಳ ಕಾರ್ಯಕ್ರಮಗಳಿಗೆ ಕಲಾತಂಡಗಳನ್ನು ಪ್ರಾಯೋಜನೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಲಾತಂಡಗಳ ಪ್ರಾಯೋಜನೆ ಕೋರಿ ಅರ್ಜಿ ಸಲ್ಲಿಸುವ ಸಂಘ-ಸಂಸ್ಥೆಯವರು ಸೇವಾಸಿಂಧು ಮುಖಾಂತರ, ತಮ್ಮ ಕಾರ್ಯಕ್ರಮದ 15 ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸುವುದು. “ಸೇವಾಸಿಂಧು” ಮೂಲಕ ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಸಂಘ-ಸಂಸ್ಥೆಗಳ ಕಾರ್ಯಕ್ರಮಕ್ಕೆ ಕಲಾತಂಡಗಳನ್ನು ಇಲಾಖೆಯಿಂದ ನಿಯಮಾನುಸಾರ ಪ್ರಾಯೋಜನೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ […]Read More

ಅರ್ಜಿ ಆಹ್ವಾನ

ಅತಿಥಿ ಶಿಕ್ಷಕರ ಹುದ್ದೆ-ಅರ್ಜಿ ಆಹ್ವಾನ

ಉಡುಪಿ, ನ 21: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಮತ್ತು ಕಾಪು ತಾಲೂಕಿನ ಮಲ್ಲಾರುವಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 30 ರ ಒಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಶಿವಳ್ಳಿ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ […]Read More

ಕನ್ನಡ

ಕೋಳಿ ಮತ್ತು ಪಶು ಆಹಾರ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಮಂಗಳೂರು ನ 21: ಕರ್ನಾಟಕ ಕುಕ್ಕುಟ ಮತ್ತು ಜಾನುವಾರು ಆಹಾರ ತಯಾರಿಕೆ ಮತ್ತು ಮಾರಾಟ. ನಿಯಂತ್ರಣ  ಆಜ್ಞೆ 1987ರಂತೆ ಕೋಳಿ ಮತ್ತು ಪಶು ಆಹಾರಗಳ ಉತ್ಪಾದಕರು ಮತ್ತು ಮಾರಾಟಗಾರರು 2020-21ನೇ ಸಾಲಿನಿಂದ ನೂತನ ಪರವಾನಿಗೆ ಅಥವಾ ನವೀಕರಣಗಳಿಗೆ ಪಶುಸಂಗೋಪನಾ ಇಲಾಖೆಯಿಂದ ವಿವಿಧ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯ ಪಶುವೈದ್ಯಧಿಕಾರಿ ಅಥವಾ ಹಿರಿಯ ಪಶು ವೈದ್ಯಧಿಕಾರಿಗಳನ್ನು ರಾಜ್ಯಾದ್ಯಂತ ಅವರ ವ್ಯಾಪ್ತಿಯಲ್ಲಿ ಬರುವ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರ ಮತ್ತು ಮಾರಾಟ ಕೇಂದ್ರಗಳ ಪರಿಶೀಲನೆಗಾಗಿ ನೇಮಿಸಲಾಗಿದೆ. ಜಿಲ್ಲೆಯಲ್ಲಿರುವ ಕುಕ್ಕುಟ ಮತ್ತು […]Read More

error: Content is protected !!