Tags : Dharmasthala

ಕನ್ನಡ

ಧರ್ಮಸ್ಥಳ ಹಿಂದೂ ರುದ್ರಭೂಮಿಗೆ ವೀರೇಂದ್ರ ಹೆಗ್ಗಡೆಯವರಿಂದ 2.50 ಲಕ್ಷ ಅನುದಾನ ಮಂಜೂರು

ಬೆಳ್ತಂಗಡಿ, ನ 05: ಧರ್ಮಸ್ಥಳದ ಹಿಂದೂ ರುದ್ರಭೂಮಿಯ ಸಮಿತಿ ಸದಸ್ಯರ ಆಶಯದಂತೆ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸುಮಾರು 6.00ಲಕ್ಷ ವೆಚ್ಚದಲ್ಲಿ ನವೀಕರಣ ಕಾರ್ಯವು ನಡೆಯುತ್ತಿದೆ. ಈ ನವೀಕರಣ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪೂರಕ ಅನುದಾನವಾಗಿ ರೂ.2,50,000 ಮಂಜೂರಾತಿ ನೀಡಿದ್ದಾರೆ. ಧರ್ಮಸ್ಥಳ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಡಿ. ಹರ್ಷೇಂದ್ರ ಕುಮಾರ್‍ರವರ ಸಲಹೆ ಸೂಚನೆಯಂತೆ ನವೀಕರಣದ ಅಂಗವಾಗಿ ನೂತನ ಸಿಲಿಕಾನ್ ಬಾಕ್ಸ್ ಅಳವಡಿಕೆ, ಶವಕಟ್ಟೆ, ವಿಶ್ರಾಂತಿ ಕೊಠಡಿ, […]Read More

Dakshina Kannada

ಎಸ್.ಡಿ.ಎಂ ಆಸ್ಪತ್ರೆಯಲ್ಲಿ 32 ಸ್ಲೈಸ್ ಸಿ.ಟಿ ಸ್ಕ್ಯಾನ್ ಲೋಕಾರ್ಪಣೆ

ಉಜಿರೆ ಅ 29: ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಿರುವ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಸೀಮನ್ಸ್ 32 ಸ್ಲೈಸ್ ಸಿ.ಟಿ ಸ್ಕ್ಯಾನ್ ಉಪಕರಣ ಇಂದು ಲೋಕಾರ್ಪಣೆಗೊಂಡಿತು. “ಹಳ್ಳಿಯ ಜನತೆಗೆ ಅತ್ಯಾಧುನಿಕ ವೈದ್ಯಕೀಯ ಸೇವೆ ಸಿಗುವಂತಾಗಬೇಕೆಂಬ ವೀರೇಂದ್ರ ಹೆಗ್ಗಡೆಯವರ ಆಶಯ ಎಸ್.ಡಿ.ಎಂ ಆಸ್ಪತ್ರೆಯ ಮೂಲಕ ಈಡೇರುತ್ತಿದೆ. ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಉಪಕರಣ, ನುರಿತ ವೈದ್ಯವೃಂದ ಹಾಗೂ ಅನುಭವಿ ಸಿಬ್ಬಂದಿಗಳನ್ನು ಬಳಸಿಕೊಂಡು ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿದೆ.” ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಡಾ| ಎಲ್ […]Read More

ಕನ್ನಡ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೇವಾ ರಶೀದಿ ವಿತರಿಸುವ ಸ್ವಯಂಚಾಲಿತ ಯಂತ್ರ ಉದ್ಘಾಟನೆ

ಪ್ರವಚನ ಮಂಟಪ ಹಾಗೂ ಸಹ್ಯಾದ್ರಿ ವಸತಿ ಗೃಹದಲ್ಲಿ ಸೇವಾ ರಶೀದಿ ವಿತರಿಸುವ ಸ್ವಯಂಚಾಲಿತ ಯಂತ್ರ (KIOSK) ಪ್ರಾರಂಭ ಕಾರ್ಡ್ ಕಾರ್ಡ್, ಯುಪಿಐ ಮೂಲಕ ಸೇವೆಯ ಹಣ ಪಾವತಿ ಧರ್ಮಸ್ಥಳ, ಅ 29: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಳದ ಭಕ್ತರ ಅನುಕೂಲತೆಗಾಗಿ ಕ್ಷೇತ್ರದ ಪ್ರವಚನ ಮಂಟಪ ಹಾಗೂ ಸಹ್ಯಾದ್ರಿ ವಸತಿ ಗೃಹದಲ್ಲಿ ಸೇವಾ ರಶೀದಿ ವಿತರಿಸುವ ಯಂತ್ರ (KIOSK) ಉದ್ಘಾಟಿಸಲಾಯಿತು. ಸೇವಾ ಕೌಂಟರ್ ಎದುರು ಜನಸಂದಣಿ ತಪ್ಪಿಸಲು ಸಹಾಯಮಾಡುವ ಈ ಯಂತ್ರ ವು ಭಕ್ತರಿಗೆ ತ್ವರಿತವಾಗಿ ಸೇವಾ ರಶೀದಿ ಪಡೆಯಲು […]Read More

ಕನ್ನಡ

ಕೃಷಿಗೆ ಪ್ರೋತ್ಸಾಹ ನೀಡಲು ಧರ್ಮಸ್ಥಳ ವತಿಯಿಂದ ‘ಯಂತ್ರಶ್ರೀ’ ಮುಖಾಂತರ ನೂತನ ಯೋಜನೆ: ಡಾ.

ಬೆಳ್ತಂಗಡಿ ಅ 24: ಕೃಷಿಕರಿಗೆ ಪ್ರೋತ್ಸಾಹ ನೀಡಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಯಂತ್ರಗಳನ್ನು ಖರೀದಿಸಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಶನಿವಾರ ತಮ್ಮ 53 ನೆ ವರ್ಷದ ಪಟ್ಟಾಭಿಷೇಕ ವರ್ಧಂತಿಯ ಸರಳ ಸಮಾರಂಭದಲ್ಲಿ ಅವರು ಮಾತನಾಡಿದರು. ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕ ರಾಜ್ಯದ 25 ಜಿಲ್ಲೆಗಳ […]Read More

Featured

ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 53ನೇ ವರ್ಧಂತ್ಯುತ್ಸವ

ಶ್ವೇತಾ ಎಸ್ ಧರ್ಮಸ್ಥಳ, ಅ 22: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರ 53ನೆ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಅಕ್ಟೊಬರ್ 24 ರಂದು ಸರಳವಾಗಿ ನಡೆಯಲಿದೆ. ನವೆಂಬರ್ 25, 1948 ರಂದು ರತ್ನವರ್ಮ ಹೆಗ್ಗಡೆ- ರತ್ನಮ್ಮ ಹೆಗ್ಗಡೆ ಅವರ ಮೊದಲನೇ ಮಗನಾಗಿ ಜನಿಸಿದ ವೀರೇಂದ್ರ ಕುಮಾರ್ ತನ್ನ ಇಪ್ಪತ್ತನೆ ವರ್ಷದಲ್ಲಿ ಧರ್ಮಸ್ಥಳದ ಇಪ್ಪತ್ತೊಂದನೆ ಧರ್ಮಾಧಿಕಾರಿ ಯಾಗಿ- ವೀರೇಂದ್ರ ಹೆಗ್ಗಡೆ ಯಾಗಿ- ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. ಎಳೆಯ ವಯಸ್ಸಿನಲ್ಲೇ ಜನರ ಸೇವೆ ಬಗ್ಗೆ ಅತ್ಯಂತ […]Read More

ಕನ್ನಡ

ಧರ್ಮಸ್ಥಳದಲ್ಲಿ ಮತ್ಸ್ಯ ಪ್ರದರ್ಶನಾಲಯ ಉದ್ಘಾಟನೆ

ಬೆಳ್ತಂಗಡಿ, ಅ 11: ಧರ್ಮಸ್ಥಳದ ಲಲಿತೋದ್ಯಾನದಲ್ಲಿ ಮತ್ಸ್ಯ ಪ್ರದರ್ಶನಾಲಯವನ್ನು ಮುಜರಾಯಿ ಹಾಗೂ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ ಪ್ರಾಣಿ – ಪಕ್ಷಿಗಳನ್ನು ಪ್ರೀತಿಯಿಂದ ಸಾಕುವುದರಿಂದ ನಮ್ಮ ಮಾನಸಿಕ ಒತ್ತಡಗಳು ದೂರವಾಗುತ್ತವೆ. ಅಲಂಕಾರಿಕ ಮೀನುಗಳನ್ನು ಕೆರೆ, ನದಿ, ಸಮುದ್ರದಲ್ಲಿ ನೋಡಲು ಸಾಧ್ಯವಿಲ್ಲ. ಮೀನು ಸಾಕುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಉದ್ಘಾಟನಾ ಭಾಷಣದಲ್ಲಿ ಸಚಿವರು ತಮ್ಮ ಇಲಾಖೆಯ ಸಾಧನಗಳ ಬಗ್ಗೆ ತಿಳಿಸಿದರು. Also read: Kasarkod, Padubidri […]Read More

ಕನ್ನಡ

ಧರ್ಮಸ್ಥಳದಲ್ಲಿ ನವರಾತ್ರಿ ಉತ್ಸವ

ಬೆಳ್ತಂಗಡಿ, ಅ 08: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅ. 17 ರಿಂದ 24ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 8 ರ ವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ವಿವರ ಅ. 17 (ಶನಿವಾರ): ಕುಮಾರಿ ಸಾನ್ವಿ ಶೆಟ್ಟಿ, ಬೆಂಗಳೂರು (ಸುಗಮ ಸಂಗೀತ) ಅ. 18 (ಆದಿತ್ಯವಾರ): ಶ್ರೀಮತಿ ಸುನಿತಾ ಶ್ರೀಪಾದ್ ರಾವ್, ಸಾಗರ (ಸುಗಮ ಸಂಗೀತ) ಅ. 19 (ಸೋಮವಾರ): ಕುಮಾರಿ […]Read More

ಕನ್ನಡ

ಧರ್ಮಸ್ಥಳದಲ್ಲಿ ಪ್ರಾರ್ಥನಾ ಸಮಾವೇಶ

ಧರ್ಮಸ್ಥಳ, ಅ 03: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ‘ಪ್ರಾರ್ಥನಾ ಸಮಾವೇಶ’ ವು ಇಂದು ನಡೆಯಿತು. ಶ್ರೀ ಕ್ಷೇತ್ರದಲ್ಲಿ 22 ನೇ ವರ್ಷದ ಭಜನಾ ತರಬೇತಿ ಕಮ್ಮಟದ ಬದಲಾಗಿ ಸಾಂಕೇತಿಕವಾಗಿ ಈ ಬಾರಿ ‘ಪ್ರಾರ್ಥನಾ ಸಮಾವೇಶ’ ವು ನಡೆಯಿತು. “ಹೆಚ್ಚು ಜನ ಸೇರಿದರೆ ಅಪಾಯವೆಂದು ಅರಿತು ಸಾಂಕೇತಿಕವಾಗಿ ಈ ವರ್ಷ ‘ಪ್ರಾರ್ಥನಾ ಸಮಾವೇಶ’ವನ್ನು ನಡೆಸಿದ್ದೇವೆ. ಮುಂದಿನ ವರ್ಷದಿಂದ ಲಕ್ಷಾಂತರ ಜನರಿಗೆ ಭಜನಾ ಕಮ್ಮಟದ ತರಬೇತಿಯನ್ನು ವೀಕ್ಷಿಸಲು ಆನ್‍ಲೈನ್ ಮೂಲಕ ವ್ಯವಸ್ಥೆ ಮಾಡುವ ಬಗ್ಗೆ […]Read More

Dakshina Kannada

ಭಾಸ್ಕರ ಹೆಗಡೆ ಅವರಿಗೆ ಪಿ.ಎಚ್.ಡಿ ಪದವಿ

ಉಜಿರೆ, ಅ.1: ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಭಾಸ್ಕರ ಹೆಗಡೆ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿ ನೀಡಿದೆ. ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ ಅವರ ಮಾರ್ಗದರ್ಶನದಲ್ಲಿ ‘ಪತ್ರಿಕೆಗಳ ಮೂಲಕ ಔಪಚಾರಿಕ ಶಿಕ್ಷಣ: ಕನ್ನಡ ಪ್ರಮುಖ ದೈನಿಕಗಳ ತೌಲನಿಕ ಅಧ್ಯಯನ’ ಶೀರ್ಷಿಕೆಯಲ್ಲಿ ಪಿ.ಎಚ್.ಡಿ ಮಹಾಪ್ರಬಂಧವನ್ನು ಸಲ್ಲಿಸಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳಕೋಡು ಗ್ರಾಮದವರಾದ ಭಾಸ್ಕರ ಹೆಗಡೆ ಅವರು […]Read More

error: Content is protected !!