Tags :Dr D Veerendra Heggade

News

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ 8ನೇ ವರ್ಷದ ಪಾದಯಾತ್ರೆ

ಬೆಳ್ತಂಗಡಿ, ಡಿಸೆಂಬರ್ 10, 2020: ಕಷ್ಟಕಾಲದಲ್ಲಿ ನಂಬಿದವರಿಗೆ ಇಂಬು ಕೊಟ್ಟು ಅಭಯದಾನ ನೀಡುವ ಪವಿತ್ರ ಕ್ಷೇತ್ರ ಧರ್ಮಸ್ಥಳ. ಅನಿರೀಕ್ಷಿತವಾಗಿ, ಅಪಾಯದ ಮಟ್ಟವನ್ನು ಅಳತೆ ಮಾಡಲೂ ಸಾಧ್ಯವಾಗದ ಕೊರೊನಾ ಭೀತಿಯಿಂದಾಗಿ ಜನರೆಲ್ಲ ಭಯ ಮತ್ತು ಆತಂಕದಿಂದ ಸೋತಿದ್ದಾರೆ. ಭೀತಿಯ ವಾತಾವರಣ ನಿವಾರಿಸಿ ಅವರಲ್ಲಿ ಪ್ರೀತಿ, ಭಕ್ತಿ, ವಿಶ್ವಾಸದೊಂದಿಗೆ ಅವಾಲುಗಳನ್ನು ಧೈರ್ಯದಿಂದ ಎದುರಿಸಲು ಧರ್ಮಸ್ಥಳದಿಂದ ಅಭಯದಾನ ನೀಡಲಾಗಿದೆ. ಸಹಸ್ರಾರು ಫಲಾನುಭವಿಗಳಿಂದ ನಮಗೆ ದೊರಕಿದ ಧನ್ಯತೆಯ ಮೌನ ಸಂದೇಶವೇ ಇದಕ್ಕೆ ಸಾಕ್ಷಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. […]Read More

ಕನ್ನಡ

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅರೋಗ್ಯ ಸಚಿವ ಡಾ. ಸುಧಾಕರ್

ಬೆಳ್ತಂಗಡಿ, ಡಿಸೆಂಬರ್ 10, 2020: ಆರೋಗ್ಯ ಸಚಿವ ಡಾ. ಸುಧಾಕರ್ ಸಕುಟುಂಬಿಕರಾಗಿ ಗುರುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು. ಕೊರೊನಾ ಹತೋಟಿಯಲ್ಲಿದೆ: ಕೊರೊನಾ ಈಗ ಹತೋಟಿಯಲ್ಲಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಒಂದು ವರ್ಷದೊಳಗೆ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಸಹಕರಿಸಬೇಕು ಎಂದು ಸಲಹೆ ನೀಡಿದರು. […]Read More

ಕನ್ನಡ

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 73 ನೆ ಜನ್ಮದಿನ ಆಚರಣೆ

ಬೆಳ್ತಂಗಡಿ, ನ 25: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 73 ನೆ ಜನ್ಮದಿನವನ್ನು ಧರ್ಮಸ್ಥಳದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು. ಮಾಣಿಲದ ಮೋಹನದಾಸ ಸ್ವಾಮೀಜಿ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ. ಸಂಪತ್ ಸಾಮ್ರಾಜ್ಯ, ಬಿ. ಅಪ್ಪಣ್ಣ ಹೆಗ್ಡೆ ಮೊದಲಾದವರು ಹೆಗ್ಗಡೆಯವರಿಗೆ ಗೌರವಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಅರ್ಪಿಸಿದರು. ಸಾವಿರಾರು ಮಂದಿ ಅಭಿಮಾನಿಗಳು, ಭಕ್ತರು ದೂರವಾಣಿ, ವಾಟ್ಸಾಪ್, ವಿದ್ಯುದಂಚೆ […]Read More

ಕನ್ನಡ

ಧರ್ಮಸ್ಥಳದಲ್ಲಿ “ವಾತ್ಸಲ್ಯ” ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ, ನ 25: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ವಾತ್ಸಲ್ಯ” ಕಾರ್ಯಕ್ರಮಕ್ಕೆ ಹೇಮಾವತಿ ವಿ. ಹೆಗ್ಗಡೆಯವರು ಚಾಲನೆ ನೀಡಿದರು. “ರೋಗಿಗಳು, ನಿರ್ಗತಿಕರು, ಅಸಹಾಯಕರು, ವಿಧವೆಯರು ಹಾಗೂ ಬಡವರ ಕಷ್ಟಗಳಿಗೆ ಮಾನವೀಯತೆಯಿಂದ ಸ್ಪಂದಿಸಿ ಸಕಾಲಿಕ ನೆರವು, ಮಾರ್ಗದರ್ಶನ ನೀಡಿ ಅವರ ದುಃಖವನ್ನು ನಿವಾರಿಸಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಅಭಯ ನೀಡುವುದೇ ವಾತ್ಸಲ್ಯ ಕಾರ್ಯಕ್ರಮದ ಉದ್ದೇಶವಾಗಿದೆ,” ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕಿಗೆ ಮಾರ್ಗದರ್ಶನ […]Read More

ಕನ್ನಡ

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದೀಪಾವಳಿ ಸಂದೇಶ

“ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ.” “ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಎಲ್ಲರೂ ಆರೋಗ್ಯ ಭಾಗ್ಯವನ್ನು ಹೊಂದಿ ಭಯ ಮುಕ್ತ ವಾತಾವರಣದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ.” […]Read More

ಕನ್ನಡ

ಗ್ರಾಮೀಣ ವಿದ್ಯಾರ್ಥಿಗಳಿಗೆ ಅಂತರ್ಜಾಲ ಶಿಕ್ಷಣ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನತಾಣ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜ್ಞಾನತಾಣ ಕಾರ್ಯಕ್ರಮ ಉದ್ಘಾಟಿಸಿದರು.Read More

error: Content is protected !!