Tags :Udupi Sri Krishna Matha

ಕನ್ನಡ

ಶ್ರೀಕೃಷ್ಣಮಠದಲ್ಲಿ ಋಕ್ಸಂಹಿತಾ ಯಾಗ ಸಂಪನ್ನ

ಉಡುಪಿ, ನ 05: ಶ್ರೀಕೃಷ್ಣಮಠದಲ್ಲಿ ಆಶ್ವಯುಜ ಶುಕ್ಲ ತ್ರಯೋದಶಿಯಿಂದ ಕೃಷ್ಣ ಪಂಚಮಿಯವರೆಗೆ ಬಡಗುಮಾಳಿಗೆಯಲ್ಲಿ ನಿರ್ಮಿಸಿದ ಮಂಟಪದಲ್ಲಿ ನಡೆಯುತ್ತಿರುವ ಋಕ್ಸಂಹಿತಾ ಯಾಗ ಇಂದು ಪೂರ್ಣಾಹುತಿಯೊಂದಿಗೆ ಸಂಪನ್ನಗೊಂಡಿತು. ಮಹಾಮಂಗಳಾರತಿ ಹಾಗೂ ಪೂರ್ಣಾಹುತಿಯು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಅವಧಾನಿ ವಿದ್ವಾನ್ ಗುಂಡಿಬೈಲ್ ಸುಬ್ರಹ್ಮಣ್ಯ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ನಂತರ ಮಧ್ವಸರೋವರದಲ್ಲಿ ಅವಭೃತ ಸ್ನಾನ ನಡೆಯಿತು.Read More

ಕನ್ನಡ

ಉಡುಪಿ ಶ್ರೀಕೃಷ್ಣ ಮಠ: ದರ್ಶನ ಅವಧಿ ವಿಸ್ತರಣೆ

ಉಡುಪಿ ನ.1: ಭಕ್ತರ ಅನುಕೂಲಕ್ಕಾಗಿ ನವೆಂಬರ್ 4ರಿಂದ ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನದ ಸಮಯ ವಿಸ್ತರಿಸಲಾಗಿದೆ. ನವೆಂಬರ್ 4ರಿಂದ ಬೆಳಿಗ್ಗೆ 8.30 ರಿಂದ ಬೆಳಿಗ್ಗೆ 10.00 ರವರೆಗೆ ಹಾಗೂ ಈ ಹಿಂದಿನಂತೆ ಮಧ್ಯಾಹ್ನದ ಸಮಯವನ್ನು 2.00 ರಿಂದ ಸಂಜೆ 5.00ರ ಬದಲು 6:00 ಗಂಟೆವರೆಗೆ ವಿಸ್ತರಿಸಿ, ಭಕ್ತಾದಿಗಳಿಗೆ ಹೆಚ್ಚು ಅನುಕೂಲವಾಗುವಂತೆ ಶ್ರೀಕೃಷ್ಣನ ದರ್ಶನ ಲಭಿಸುವ ಅವಕಾಶವನ್ನು ಪರ್ಯಾಯ ಶ್ರೀಪಾದರು ಕಲ್ಪಿಸಿದ್ದಾರೆ ಎಂದು ಶ್ರೀಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ. ಕೋವಿಡ್ 19, ಲಾಕ್ ಡೌನ್ ನಿಂದಾಗಿ ಉಡುಪಿ ಶ್ರೀಕೃಷ್ಣ […]Read More

News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೊಂಡೆವೂರು ಶ್ರೀ ಭೇಟಿ

ಉಡುಪಿ, ಅ 01: ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು. ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆಗಾಗಿ ತುಳಸಿಯನ್ನು ನೀಡಿ ದೇವರ ದರ್ಶನ ಪಡೆದುಕೊಂಡರು. ನಂತರ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಕೊಂಡೆವೂರಿನ ಶ್ರಿಯೋಗಾನಂದ ಸರಸ್ವತಿ ಸ್ವಾಮೀಜಿಯವರನ್ನು ಶ್ರೀಕೃಷ್ಣ ದೇವರ ಪ್ರಸಾದ ನೀಡಿ ಗೌರವಿಸಿದರು.Read More

error: Content is protected !!