Tags :Udupi Sri Krishna Matha

ಕನ್ನಡ

ಶ್ರೀಕೃಷ್ಣ ಮಠದಲ್ಲಿ ನಿರಂತರ ಭಜನೆ ಉದ್ಘಾಟನೆ

ಉಡುಪಿ, ಅ 14: ಶ್ರೀಕೃಷ್ಣ ಮಠದಲ್ಲಿ ನಿರಂತರ ಭಜನೆ ಉದ್ಘಾಟನೆಯನ್ನು ಪರ್ಯಾಯ ಅದಮಾರು ಹಿರಿಯ ಮಠಾಧಿಪತಿಗಳಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು, ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು,ಕಿರಿಯ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಹಾಗೂ ಚಿತ್ರಾಪುರ ಮಠಾಧೀಶರಾದ ಶ್ರೀವಿದ್ಯೇಂದ್ರತೀರ್ಥ ಶ್ರೀಪಾದರೊಂದಿಗೆ ದೀಪ ಬೆಳಗಿಸಿ ಮತ್ತು ದಸರಾ ಪದಗಳನ್ನು ಹಾಡಿ ಉದ್ಘಾಟಿಸಿದರು. ಪಲಿಮಾರಿನ ಯೋಗದೀಪಿಕಾ ಗುರುಕುಲದ ಪ್ರಸಕ್ತ ಮತ್ತು ಹಳೆ ವಿದ್ಯಾರ್ಥಿಗಳಿಂದ ಭಜನೆ ನಡೆಯಿತು.Read More

ಕನ್ನಡ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಎಡನೀರು ಸಂಸ್ಥಾನದ ನಿಯೋಜಿತ ಪೀಠಾಧಿಪತಿ ಭೇಟಿ

ಉಡುಪಿ ಅ 09: ಎಡನೀರು ತೋಟಕಾಚಾರ್ಯ ಸಂಸ್ಥಾನದ ಪೀಠಾಧಿಪತಿಗಳಾಗಿ ದೀಕ್ಷಿತರಾಗಲಿರುವ ಶ್ರೀ ಜಯರಾಮ ಮಂಜತ್ತಾಯರು ತಮ್ಮ ಸನ್ಯಾಸ ದೀಕ್ಷಾ ಪೂರ್ವಭಾವಿ ತೀರ್ಥ ಕ್ಷೇತ್ರ ಸಂಚಾರ ನಿಮಿತ್ತ ಗುರುವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣಮುಖ್ಯಪ್ರಾಣರ ದರ್ಶನ ಪಡೆದ ಬಳಿಕ ಶ್ರೀ ಮದನಂತೇಶ್ವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಅಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಅದೃಶ್ಯ ಸನ್ನಿಧಾನದ ದರ್ಶನ ಪಡೆದು ಭಕ್ತಿ ಸಮರ್ಪಸಿದರು. ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಬಳಿಕ […]Read More

ಕನ್ನಡ

ಶ್ರೀ ಕೃಷ್ಣ ಮಠದ ಕಾಷ್ಠಶಿಲ್ಪ ವೀಕ್ಷಿಸಿದ ಕೃಷ್ಣಾಪುರ, ಸೋದೆ ಮಠಾಧೀಶರು

ಉಡುಪಿ, ಸೆ 29: ಶ್ರೀಕೃಷ್ಣ ಮಠದಲ್ಲಿ,  ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥರ ಆಶಯದಂತೆ ಕಾಷ್ಠಶಿಲ್ಪ ಹಾಗೂ ಪ್ರಾಚೀನ ಪಾರಂಪರಿಕ ರೀತಿಯಲ್ಲಿ ನಿರ್ಮಾಣಗೊಂಡ  ದೇವರ ದರ್ಶನಕ್ಕೆ ಬರುವ ವಿಶೇಷ ದಾರಿಯನ್ನು,  ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು  ಆಗಮಿಸಿ ಅವಲೋಕಿಸಿ  ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಇಂಜಿನಿಯರ್ ರಾಘವೇಂದ್ರ ರಾವ್,ಪರ್ಯಾಯ ಮಠದ ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿನ್ತಯ,ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶೀಕೃಷ್ಣ ಸೇವಾ ಬಳಗದ ವೈ.ಎನ್.ರಾಮಚಂದ್ರ ರಾವ್ ಮೊದಲಾದವರು ಉಪಸ್ಥಿತರಿದ್ದರು.  Read More

error: Content is protected !!